أَلَمۡ تَرَ إِلَى ٱلَّذِي حَآجَّ إِبۡرَٰهِـۧمَ فِي رَبِّهِۦٓ أَنۡ ءَاتَىٰهُ ٱللَّهُ ٱلۡمُلۡكَ إِذۡ قَالَ إِبۡرَٰهِـۧمُ رَبِّيَ ٱلَّذِي يُحۡيِۦ وَيُمِيتُ قَالَ أَنَا۠ أُحۡيِۦ وَأُمِيتُۖ قَالَ إِبۡرَٰهِـۧمُ فَإِنَّ ٱللَّهَ يَأۡتِي بِٱلشَّمۡسِ مِنَ ٱلۡمَشۡرِقِ فَأۡتِ بِهَا مِنَ ٱلۡمَغۡرِبِ فَبُهِتَ ٱلَّذِي كَفَرَۗ وَٱللَّهُ لَا يَهۡدِي ٱلۡقَوۡمَ ٱلظَّٰلِمِينَ
ಇಬ್ರಾಹೀಮರೊಡನೆ ಅವರ ಪರಿಪಾಲಕನ (ಅಲ್ಲಾಹನ) ವಿಷಯದಲ್ಲಿ ತರ್ಕಿಸಿದವನನ್ನು ನೀವು ನೋಡಿಲ್ಲವೇ? ಅಲ್ಲಾಹು ಅವನಿಗೆ ಸಾಮ್ರಾಜ್ಯವನ್ನು ದಯಪಾಲಿಸಿದ್ದನು. "ನನ್ನ ಪರಿಪಾಲಕನು (ಅಲ್ಲಾಹು) ಜೀವ ಮತ್ತು ಮರಣವನ್ನು ನೀಡುತ್ತಾನೆ" ಎಂದು ಇಬ್ರಾಹೀಂ ಹೇಳಿದಾಗ, "ನಾನು ಕೂಡ ಜೀವ ಮತ್ತು ಮರಣವನ್ನು ನೀಡುತ್ತೇನೆ" ಎಂದು ಅವನು ಹೇಳಿದನು. ಇಬ್ರಾಹೀಂ ಹೇಳಿದರು: "ಅಲ್ಲಾಹು ಸೂರ್ಯನನ್ನು ಪೂರ್ವದಿಂದ ತರುತ್ತಾನೆ; ನೀವು ಅದನ್ನು ಪಶ್ಚಿಮದಿಂದ ತನ್ನಿರಿ!" ಆಗ ಆ ಸತ್ಯನಿಷೇಧಿ ಮೂಕವಿಸ್ಮಿತನಾದನು. ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.