يَٰٓأَيُّهَا ٱلَّذِينَ ءَامَنُواْ لَا تُبۡطِلُواْ صَدَقَٰتِكُم بِٱلۡمَنِّ وَٱلۡأَذَىٰ كَٱلَّذِي يُنفِقُ مَالَهُۥ رِئَآءَ ٱلنَّاسِ وَلَا يُؤۡمِنُ بِٱللَّهِ وَٱلۡيَوۡمِ ٱلۡأٓخِرِۖ فَمَثَلُهُۥ كَمَثَلِ صَفۡوَانٍ عَلَيۡهِ تُرَابٞ فَأَصَابَهُۥ وَابِلٞ فَتَرَكَهُۥ صَلۡدٗاۖ لَّا يَقۡدِرُونَ عَلَىٰ شَيۡءٖ مِّمَّا كَسَبُواْۗ وَٱللَّهُ لَا يَهۡدِي ٱلۡقَوۡمَ ٱلۡكَٰفِرِينَ
ಓ ಸತ್ಯವಿಶ್ವಾಸಿಗಳೇ! ಉಪಕಾರ ಸ್ಮರಣೆ ಬಯಸುವ ಮೂಲಕ ಮತ್ತು ತೊಂದರೆ ಕೊಡುವ ಮೂಲಕ ನಿಮ್ಮ ದಾನಗಳನ್ನು ವ್ಯರ್ಥಗೊಳಿಸಬೇಡಿ. ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ವಿಶ್ವಾಸವಿಡದೆ ಕೇವಲ ಜನರು ನೋಡುವುದಕ್ಕಾಗಿ ಖರ್ಚು ಮಾಡುವ ವ್ಯಕ್ತಿಯಂತೆ ನೀವಾಗಬೇಡಿ. ಅವನ ಉದಾಹರಣೆಯು ನುಣುಪಾದ ಒಂದು ಬಂಡೆಯಂತೆ. ಅದರ ಮೇಲೆ ಸ್ವಲ್ಪ ಮಣ್ಣಿದೆ. ಅದಕ್ಕೆ ಜಡಿಮಳೆ ಸುರಿದು ಅದು ಅದನ್ನು ಬೋಳು ಮಾಡಿಬಿಟ್ಟಿತು. ಅವರಿಗೆ ಅವರು ಸಂಪಾದಿಸಿದ ಯಾವುದನ್ನೂ ವಶದಲ್ಲಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.