2 : 273
لِلۡفُقَرَآءِ ٱلَّذِينَ أُحۡصِرُواْ فِي سَبِيلِ ٱللَّهِ لَا يَسۡتَطِيعُونَ ضَرۡبٗا فِي ٱلۡأَرۡضِ يَحۡسَبُهُمُ ٱلۡجَاهِلُ أَغۡنِيَآءَ مِنَ ٱلتَّعَفُّفِ تَعۡرِفُهُم بِسِيمَٰهُمۡ لَا يَسۡـَٔلُونَ ٱلنَّاسَ إِلۡحَافٗاۗ وَمَا تُنفِقُواْ مِنۡ خَيۡرٖ فَإِنَّ ٱللَّهَ بِهِۦ عَلِيمٌ
ಭೂಮಿಯಲ್ಲಿ ಓಡಾಡಲು ಸಾಧ್ಯವಾಗದಂತೆ ಅಲ್ಲಾಹನ ಮಾರ್ಗದಲ್ಲಿ ಬಂಧನದಲ್ಲಿರುವ ಬಡವರಿಗೆ (ಖರ್ಚು ಮಾಡಿರಿ). ಅವರಿಗೆ ಆತ್ಮಸಂಯಮವಿರುವ ಕಾರಣ (ಇತರರ ಮುಂದೆ ಕೈ ಚಾಚಿ ಬೇಡದ ಕಾರಣ) ಅವಿವೇಕಿಗಳು ಅವರನ್ನು ಶ್ರೀಮಂತರೆಂದು ಭಾವಿಸುತ್ತಾರೆ. ನಿಮಗೆ ಅವರನ್ನು ಅವರ ಹಾವಭಾವಗಳಿಂದ ಗುರುತಿಸಬಹುದು. ಅವರು ಜನರೊಡನೆ ಕಾಡಿ ಬೇಡುವುದಿಲ್ಲ. ನೀವು (ಅಲ್ಲಾಹನ ಮಾರ್ಗದಲ್ಲಿ) ಯಾವುದೇ ಸಂಪತ್ತನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.
Explanation & meanings · 1
- ಇಲ್ಲಿ ಉದ್ದೇಶಿಸಿರುವುದು ಮಕ್ಕಾದಿಂದ ಮದೀನಕ್ಕೆ ವಲಸೆ ಬಂದ ಮುಹಾಜಿರ್ಗಳನ್ನಾಗಿದೆ. ಅವರು ಅಲ್ಲಾಹನ ಮಾರ್ಗದಲ್ಲಿ ಎಲ್ಲವನ್ನೂ ತ್ಯಜಿಸಿ ಬಂದಿದ್ದರು.