Skip to content
البَقَرَة /

ಆಯತ್ 61

2 : 61
البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 61

وَإِذۡ قُلۡتُمۡ يَٰمُوسَىٰ لَن نَّصۡبِرَ عَلَىٰ طَعَامٖ وَٰحِدٖ فَٱدۡعُ لَنَا رَبَّكَ يُخۡرِجۡ لَنَا مِمَّا تُنۢبِتُ ٱلۡأَرۡضُ مِنۢ بَقۡلِهَا وَقِثَّآئِهَا وَفُومِهَا وَعَدَسِهَا وَبَصَلِهَاۖ قَالَ أَتَسۡتَبۡدِلُونَ ٱلَّذِي هُوَ أَدۡنَىٰ بِٱلَّذِي هُوَ خَيۡرٌۚ ٱهۡبِطُواْ مِصۡرٗا فَإِنَّ لَكُم مَّا سَأَلۡتُمۡۗ وَضُرِبَتۡ عَلَيۡهِمُ ٱلذِّلَّةُ وَٱلۡمَسۡكَنَةُ وَبَآءُو بِغَضَبٖ مِّنَ ٱللَّهِۚ ذَٰلِكَ بِأَنَّهُمۡ كَانُواْ يَكۡفُرُونَ بِـَٔايَٰتِ ٱللَّهِ وَيَقۡتُلُونَ ٱلنَّبِيِّـۧنَ بِغَيۡرِ ٱلۡحَقِّۚ ذَٰلِكَ بِمَا عَصَواْ وَّكَانُواْ يَعۡتَدُونَ

ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಮೂಸಾ! ಒಂದೇ ರೀತಿಯ ಆಹಾರವನ್ನು ಸಹಿಸಿಕೊಂಡಿರಲು ನಮಗೆ ಸಾಧ್ಯವೇ ಇಲ್ಲ. ಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ಅವನು ನಮಗೆ ಭೂಮಿಯಲ್ಲಿ ಬೆಳೆಯುವ ಸೊಪ್ಪು, ಸೌತೆ, ಗೋಧಿ, ಮಸೂರ ಮತ್ತು ಈರುಳ್ಳಿಯನ್ನು ಉತ್ಪಾದಿಸಿಕೊಡಲಿ.” ಮೂಸಾ ಹೇಳಿದರು: “ಅತ್ಯುತ್ತಮ ವಸ್ತುವನ್ನು ಬಿಟ್ಟು ಕಳಪೆ ವಸ್ತುವನ್ನು ಏಕೆ ಕೇಳುತ್ತೀರಿ? ನೀವು ಯಾವುದಾದರೂ ನಗರಕ್ಕೆ ಹೋಗಿರಿ. ಅಲ್ಲಿ ನೀವು ಕೇಳಿದ್ದೆಲ್ಲವೂ ನಿಮಗೆ ಸಿಗುವುದು.” (ಅವರ ದರ್ಪದಿಂದಾಗಿ) ಅವರ ಮೇಲೆ ಅಪಮಾನ ಹಾಗೂ ಬಡತನವನ್ನು ಹೊದಿಸಲಾಯಿತು; ಅವರು ಅಲ್ಲಾಹನ ಕೋಪದೊಂದಿಗೆ ಮರಳಿದರು. ಅದೇಕೆಂದರೆ, ಅವರು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುತ್ತಿದ್ದರು. ಅದು ಅವರ ಅವಿಧೇಯತೆ ಮತ್ತು ಅತಿರೇಕದ ಫಲಿತಾಂಶವಾಗಿತ್ತು.