25 : 63
وَعِبَادُ ٱلرَّحۡمَٰنِ ٱلَّذِينَ يَمۡشُونَ عَلَى ٱلۡأَرۡضِ هَوۡنٗا وَإِذَا خَاطَبَهُمُ ٱلۡجَٰهِلُونَ قَالُواْ سَلَٰمٗا
ಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.
Explanation & meanings · 1
- ಅಂದರೆ ಅವರು ಅವಿವೇಕಿಗಳೊಡನೆ ತರ್ಕ ಅಥವಾ ವಾಗ್ವಾದಕ್ಕೆ ಇಳಿಯುವುದಿಲ್ಲ. ಬದಲಿಗೆ, ಸಭ್ಯವಾದ ರೀತಿಯಲ್ಲಿ ಅವರನ್ನು ನಿರ್ಲಕ್ಷಿಸುತ್ತಾ ಸಾಗಿ ಬಿಡುತ್ತಾರೆ.