فَكُلًّا أَخَذۡنَا بِذَنۢبِهِۦۖ فَمِنۡهُم مَّنۡ أَرۡسَلۡنَا عَلَيۡهِ حَاصِبٗا وَمِنۡهُم مَّنۡ أَخَذَتۡهُ ٱلصَّيۡحَةُ وَمِنۡهُم مَّنۡ خَسَفۡنَا بِهِ ٱلۡأَرۡضَ وَمِنۡهُم مَّنۡ أَغۡرَقۡنَاۚ وَمَا كَانَ ٱللَّهُ لِيَظۡلِمَهُمۡ وَلَٰكِن كَانُوٓاْ أَنفُسَهُمۡ يَظۡلِمُونَ
ಹೀಗೆ ನಾವು ಪ್ರತಿಯೊಬ್ಬರನ್ನೂ ಅವರು ಮಾಡಿದ ಪಾಪಗಳಿಗಾಗಿ ಹಿಡಿದು ಶಿಕ್ಷಿಸಿದೆವು. ಅವರಲ್ಲಿ ಕೆಲವರ ವಿರುದ್ಧ ನಾವು ಕಲ್ಲುಗಳ ಬಿರುಗಾಳಿಯನ್ನು ಕಳುಹಿಸಿದೆವು, ಅವರಲ್ಲಿ ಕೆಲವರನ್ನು ಚೀತ್ಕಾರವು ಹಿಡಿದು ಬಿಟ್ಟಿತು, ಅವರಲ್ಲಿ ಕೆಲವರನ್ನು ನಾವು ಭೂಮಿಯಲ್ಲಿ ಹುದುಗಿಸಿದೆವು ಮತ್ತು ಅವರಲ್ಲಿ ಕೆಲವರನ್ನು ನೀರಿನಲ್ಲಿ ಮುಳುಗಿಸಿ ಕೊಂದೆವು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಸ್ವತಃ ಅವರೇ ಅವರೊಡನೆ ಅನ್ಯಾಯವೆಸಗಿದರು.