ضُرِبَتۡ عَلَيۡهِمُ ٱلذِّلَّةُ أَيۡنَ مَا ثُقِفُوٓاْ إِلَّا بِحَبۡلٖ مِّنَ ٱللَّهِ وَحَبۡلٖ مِّنَ ٱلنَّاسِ وَبَآءُو بِغَضَبٖ مِّنَ ٱللَّهِ وَضُرِبَتۡ عَلَيۡهِمُ ٱلۡمَسۡكَنَةُۚ ذَٰلِكَ بِأَنَّهُمۡ كَانُواْ يَكۡفُرُونَ بِـَٔايَٰتِ ٱللَّهِ وَيَقۡتُلُونَ ٱلۡأَنۢبِيَآءَ بِغَيۡرِ حَقّٖۚ ذَٰلِكَ بِمَا عَصَواْ وَّكَانُواْ يَعۡتَدُونَ
ಅವರು ಎಲ್ಲೇ ಇದ್ದರೂ ಅವರ ಮೇಲೆ ಅವಮಾನವನ್ನು ಹೇರಲಾಗಿದೆ. ಅಲ್ಲಾಹನ ಹಗ್ಗದ (ಕರಾರಿನ) ಅಥವಾ ಜನರ ಹಗ್ಗದ (ಕರಾರಿನ) ಆಶ್ರಯದಲ್ಲಿರುವವರ ಹೊರತು. ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾಗಿದ್ದಾರೆ. ಅವರ ಮೇಲೆ ದರಿದ್ರತೆಯನ್ನು ಹೇರಲಾಗಿದೆ. ಅದೇಕೆಂದರೆ ಅವರು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುತ್ತಿದ್ದರು. ಅದೇಕೆಂದರೆ ಅವರು ಅವಿಧೇಯತೆ ತೋರುತ್ತಿದ್ದರು ಮತ್ತು ಅತಿರೇಕವೆಸಗುತ್ತಿದ್ದರು.