3 : 20
فَإِنۡ حَآجُّوكَ فَقُلۡ أَسۡلَمۡتُ وَجۡهِيَ لِلَّهِ وَمَنِ ٱتَّبَعَنِۗ وَقُل لِّلَّذِينَ أُوتُواْ ٱلۡكِتَٰبَ وَٱلۡأُمِّيِّـۧنَ ءَأَسۡلَمۡتُمۡۚ فَإِنۡ أَسۡلَمُواْ فَقَدِ ٱهۡتَدَواْۖ وَّإِن تَوَلَّوۡاْ فَإِنَّمَا عَلَيۡكَ ٱلۡبَلَٰغُۗ وَٱللَّهُ بَصِيرُۢ بِٱلۡعِبَادِ
ಅದರ ನಂತರವೂ ಅವರು ನಿಮ್ಮೊಡನೆ ತರ್ಕ ಮಾಡಿದರೆ ನೀವು ಹೇಳಿರಿ: “ನಾನು ಮತ್ತು ನನ್ನ ಅನುಯಾಯಿಗಳು ನಮ್ಮ ಮುಖಗಳನ್ನು ಸಂಪೂರ್ಣವಾಗಿ ಅಲ್ಲಾಹನಿಗೆ ಶರಣಾಗಿಸಿದ್ದೇವೆ.” ಗ್ರಂಥ ನೀಡಲಾದವರೊಂದಿಗೆ ಮತ್ತು ಅನಕ್ಷರಸ್ಥರೊಂದಿಗೆ (ಅರಬ್ ಬಹುದೇವಾರಾಧಕರೊಂದಿಗೆ) ಕೇಳಿರಿ: “ನೀವು ಶರಣಾಗಿದ್ದೀರಾ?” ಅವರು ಶರಣಾದರೆ ಅವರು ಸನ್ಮಾರ್ಗವನ್ನು ಪಡೆಯುತ್ತಾರೆ. ಆದರೆ ಅವರು ಮುಖ ತಿರುಗಿಸಿ ನಡೆದರೆ ನಿಮ್ಮ ಕರ್ತವ್ಯವು ಅವರಿಗೆ ಸಂದೇಶವನ್ನು ತಲುಪಿಸಿಕೊಡುವುದು ಮಾತ್ರ. ಅಲ್ಲಾಹು ತನ್ನ ದಾಸರನ್ನು ನೋಡುತ್ತಿದ್ದಾನೆ.