33 : 20
يَحۡسَبُونَ ٱلۡأَحۡزَابَ لَمۡ يَذۡهَبُواْۖ وَإِن يَأۡتِ ٱلۡأَحۡزَابُ يَوَدُّواْ لَوۡ أَنَّهُم بَادُونَ فِي ٱلۡأَعۡرَابِ يَسۡـَٔلُونَ عَنۡ أَنۢبَآئِكُمۡۖ وَلَوۡ كَانُواْ فِيكُم مَّا قَٰتَلُوٓاْ إِلَّا قَلِيلٗا
ಮಿತ್ರಪಡೆಗಳು (ವೈರಿಗಳು) ಓಡಿಹೋಗಿರಲಿಕ್ಕಿಲ್ಲ ಎಂದು ಅವರು (ಕಪಟವಿಶ್ವಾಸಿಗಳು) ಭಾವಿಸುತ್ತಾರೆ. ಮಿತ್ರಪಡೆಗಳೇನಾದರೂ ಪುನಃ ಬಂದರೆ, ಗ್ರಾಮೀಣ ಅರಬ್ಬರೊಂದಿಗೆ ಸೇರಿ ಮರುಭೂಮಿಗೆ ಹೋಗಿ ಅಲ್ಲಿ ನಿಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾ ಬದುಕುತ್ತಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಅವರು ಚಿಂತಿಸುತ್ತಾರೆ. ಇನ್ನು ಅವರು ನಿಮ್ಮ ಜೊತೆ (ಮದೀನದಲ್ಲಿ) ಇದ್ದರೂ ಅವರು ಸ್ವಲ್ಪ ಮಾತ್ರ ಯುದ್ಧ ಮಾಡುವರು.