وَقَالَ ٱلَّذِينَ ٱسۡتُضۡعِفُواْ لِلَّذِينَ ٱسۡتَكۡبَرُواْ بَلۡ مَكۡرُ ٱلَّيۡلِ وَٱلنَّهَارِ إِذۡ تَأۡمُرُونَنَآ أَن نَّكۡفُرَ بِٱللَّهِ وَنَجۡعَلَ لَهُۥٓ أَندَادٗاۚ وَأَسَرُّواْ ٱلنَّدَامَةَ لَمَّا رَأَوُاْ ٱلۡعَذَابَۚ وَجَعَلۡنَا ٱلۡأَغۡلَٰلَ فِيٓ أَعۡنَاقِ ٱلَّذِينَ كَفَرُواْۖ هَلۡ يُجۡزَوۡنَ إِلَّا مَا كَانُواْ يَعۡمَلُونَ
ದುರ್ಬಲರು ಪ್ರಬಲರೊಡನೆ ಹೇಳುವರು: “ಅಲ್ಲ, ವಾಸ್ತವವಾಗಿ ಅದು ನೀವು ಹಗಲು-ರಾತ್ರಿ ಮಾಡುತ್ತಿದ್ದ ಪಿತೂರಿಯ ಫಲವಾಗಿತ್ತು. ನಾವು ಅಲ್ಲಾಹನನ್ನು ನಿಷೇಧಿಸಲು ಮತ್ತು ಅವನಿಗೆ ಸರಿಸಾಟಿಗಳನ್ನು ನಿಶ್ಚಯಿಸಲು ನೀವು ನಮ್ಮೊಂದಿಗೆ ಆದೇಶಿಸುತ್ತಿದ್ದ ಸಂದರ್ಭ(ವನ್ನು ಸ್ಮರಿಸಿ).” ಶಿಕ್ಷೆಯನ್ನು ಕಾಣುವಾಗ ಅವರು ತಮ್ಮ ಹತಾಶೆಯನ್ನು ಮನಸ್ಸಿನಲ್ಲೇ ಮುಚ್ಚಿಡುವರು. ನಾವು ಸತ್ಯನಿಷೇಧಿಗಳ ಕೊರಳುಗಳಲ್ಲಿ ಸಂಕೋಲೆಗಳನ್ನು ಹಾಕುವೆವು. ಅವರು ಮಾಡಿದ ಕರ್ಮಗಳ ಪ್ರತಿಫಲವನ್ನಲ್ಲದೆ ಬೇರೇನಾದರೂ ಅವರಿಗೆ ನೀಡಲಾಗುವುದೇ?