وَلَا تَزِرُ وَازِرَةٞ وِزۡرَ أُخۡرَىٰۚ وَإِن تَدۡعُ مُثۡقَلَةٌ إِلَىٰ حِمۡلِهَا لَا يُحۡمَلۡ مِنۡهُ شَيۡءٞ وَلَوۡ كَانَ ذَا قُرۡبَىٰٓۗ إِنَّمَا تُنذِرُ ٱلَّذِينَ يَخۡشَوۡنَ رَبَّهُم بِٱلۡغَيۡبِ وَأَقَامُواْ ٱلصَّلَوٰةَۚ وَمَن تَزَكَّىٰ فَإِنَّمَا يَتَزَكَّىٰ لِنَفۡسِهِۦۚ وَإِلَى ٱللَّهِ ٱلۡمَصِيرُ
ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ಪಾಪಭಾರವನ್ನು ಹೊತ್ತು ಕಷ್ಟಪಡುವವನು ತನ್ನ ಭಾರವನ್ನು ಹೊರಲು ಯಾರನ್ನಾದರೂ ಕರೆದರೆ, ಅವನು ಅದರಿಂದ ಏನನ್ನೂ ಹೊರುವುದಿಲ್ಲ. ಅವನು ಹತ್ತಿರದ ಸಂಬಂಧಿಯಾಗಿದ್ದರೂ ಸಹ. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಅದೃಶ್ಯ ಸ್ಥಿತಿಯಲ್ಲಿ ಭಯಪಡುವವರಿಗೆ ಮತ್ತು ನಮಾಝ್ ಸಂಸ್ಥಾಪಿಸುವವರಿಗೆ ಮಾತ್ರ ನೀವು ನೀಡುವ ಎಚ್ಚರಿಕೆ ಪ್ರಯೋಜನಕಾರಿಯಾಗುತ್ತದೆ. ಯಾರು ಪರಿಶುದ್ಧನಾಗುತ್ತಾನೋ ಅವನು ಪರಿಶುದ್ಧನಾಗುವುದು ಅವನ ಒಳಿತಿಗೇ ಆಗಿದೆ. ಎಲ್ಲರೂ ಅಲ್ಲಾಹನ ಬಳಿಗೇ ಮರಳಿ ಹೋಗಬೇಕಾಗಿದೆ.