35 : 45
وَلَوۡ يُؤَاخِذُ ٱللَّهُ ٱلنَّاسَ بِمَا كَسَبُواْ مَا تَرَكَ عَلَىٰ ظَهۡرِهَا مِن دَآبَّةٖ وَلَٰكِن يُؤَخِّرُهُمۡ إِلَىٰٓ أَجَلٖ مُّسَمّٗىۖ فَإِذَا جَآءَ أَجَلُهُمۡ فَإِنَّ ٱللَّهَ كَانَ بِعِبَادِهِۦ بَصِيرَۢا
ಮನುಷ್ಯರು ಮಾಡಿದ ಅನ್ಯಾಯಗಳ ಕಾರಣದಿಂದ ಅಲ್ಲಾಹು ಅವರನ್ನು ಹಿಡಿದು ಶಿಕ್ಷಿಸುತ್ತಿದ್ದರೆ, ಭೂಮಿಯಲ್ಲಿ ಒಂದೇ ಒಂದು ಜೀವಿಯನ್ನೂ ಅವನು ಉಳಿಸುತ್ತಿರಲಿಲ್ಲ. ಆದರೆ ಒಂದು ನಿಶ್ಚಿತ ಅವಧಿಯವರೆಗೆ ಅವನು ಅವರಿಗೆ ಕಾಲಾವಕಾಶ ನೀಡುತ್ತಾನೆ. ಅವರ ಅವಧಿಯೇನಾದರೂ ಬಂದುಬಿಟ್ಟರೆ (ಅವರಿಗೆ ಪಾರಾಗಲು ಸಾಧ್ಯವಿಲ್ಲ). ನಿಶ್ಚಯವಾಗಿಯೂ ಅಲ್ಲಾಹು ತನ್ನ ದಾಸರನ್ನು ನೋಡುತ್ತಿದ್ದಾನೆ.