38 : 26
يَٰدَاوُۥدُ إِنَّا جَعَلۡنَٰكَ خَلِيفَةٗ فِي ٱلۡأَرۡضِ فَٱحۡكُم بَيۡنَ ٱلنَّاسِ بِٱلۡحَقِّ وَلَا تَتَّبِعِ ٱلۡهَوَىٰ فَيُضِلَّكَ عَن سَبِيلِ ٱللَّهِۚ إِنَّ ٱلَّذِينَ يَضِلُّونَ عَن سَبِيلِ ٱللَّهِ لَهُمۡ عَذَابٞ شَدِيدُۢ بِمَا نَسُواْ يَوۡمَ ٱلۡحِسَابِ
“ಓ ದಾವೂದ್! ನಿಶ್ಚಯವಾಗಿಯೂ ನಾವು ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಯಾಗಿ ಮಾಡಿದ್ದೇವೆ. ಆದ್ದರಿಂದ ನೀವು ಜನರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಿರಿ. ನೀವು ಸ್ವೇಚ್ಛೆಯನ್ನು ಹಿಂಬಾಲಿಸಬೇಡಿ. ಅದು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸಿಬಿಡುತ್ತದೆ. ಯಾರು ಅಲ್ಲಾಹನ ಮಾರ್ಗದಿಂದ ತಪ್ಪಿಹೋಗುತ್ತಾರೋ ಅವರು ವಿಚಾರಣಾ ದಿನವನ್ನು ಮರೆತ ಕಾರಣ ಅವರಿಗೆ ನಿಶ್ಚಯವಾಗಿಯೂ ಕಠಿಣವಾದ ಶಿಕ್ಷೆಯಿದೆ.