39 : 49
فَإِذَا مَسَّ ٱلۡإِنسَٰنَ ضُرّٞ دَعَانَا ثُمَّ إِذَا خَوَّلۡنَٰهُ نِعۡمَةٗ مِّنَّا قَالَ إِنَّمَآ أُوتِيتُهُۥ عَلَىٰ عِلۡمِۭۚ بَلۡ هِيَ فِتۡنَةٞ وَلَٰكِنَّ أَكۡثَرَهُمۡ لَا يَعۡلَمُونَ
ಮನುಷ್ಯನಿಗೆ ತೊಂದರೆಯುಂಟಾದರೆ ಅವನು ನಮ್ಮನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ನಾವು ಅವನಿಗೆ ನಮ್ಮ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ಇದು ನನ್ನ ಜ್ಞಾನದ ಕಾರಣದಿಂದ ನನಗೆ ನೀಡಲಾಗಿದೆ.” ಅಲ್ಲ, ವಾಸ್ತವವಾಗಿ ಅದೊಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.