39 : 67
وَمَا قَدَرُواْ ٱللَّهَ حَقَّ قَدۡرِهِۦ وَٱلۡأَرۡضُ جَمِيعٗا قَبۡضَتُهُۥ يَوۡمَ ٱلۡقِيَٰمَةِ وَٱلسَّمَٰوَٰتُ مَطۡوِيَّٰتُۢ بِيَمِينِهِۦۚ سُبۡحَٰنَهُۥ وَتَعَٰلَىٰ عَمَّا يُشۡرِكُونَ
ಅವರು ಅಲ್ಲಾಹನಿಗೆ ಮಹತ್ವ ನೀಡಬೇಕಾದ ರೀತಿಯಲ್ಲಿ ಮಹತ್ವ ನೀಡಲಿಲ್ಲ. ಪುನರುತ್ಥಾನ ದಿನದಂದು ಭೂಮಿಯು ಸಂಪೂರ್ಣವಾಗಿ ಅವನ ಮುಷ್ಠಿಯಲ್ಲಿರುತ್ತದೆ ಮತ್ತು ಆಕಾಶಗಳೆಲ್ಲವೂ ಅವನ ಬಲಗೈಯಲ್ಲಿ ಸುರುಳಿಯಾಗಿರುತ್ತವೆ. ಅವರು ಸಹಾಭಾಗಿತ್ವ (ಶಿರ್ಕ್) ಮಾಡುವ ಎಲ್ಲಾ ವಸ್ತುಗಳಿಂದಲೂ ಅವನು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.