Skip to content
النِّسَاء /

ಆಯತ್ 92

4 : 92
النِّسَاء ಆಯತ್‌ಗಳು 176
ಸೂರ · النِّسَاء
ಕನ್ನಡ · Hamza
4 : 92

وَمَا كَانَ لِمُؤۡمِنٍ أَن يَقۡتُلَ مُؤۡمِنًا إِلَّا خَطَـٔٗاۚ وَمَن قَتَلَ مُؤۡمِنًا خَطَـٔٗا فَتَحۡرِيرُ رَقَبَةٖ مُّؤۡمِنَةٖ وَدِيَةٞ مُّسَلَّمَةٌ إِلَىٰٓ أَهۡلِهِۦٓ إِلَّآ أَن يَصَّدَّقُواْۚ فَإِن كَانَ مِن قَوۡمٍ عَدُوّٖ لَّكُمۡ وَهُوَ مُؤۡمِنٞ فَتَحۡرِيرُ رَقَبَةٖ مُّؤۡمِنَةٖۖ وَإِن كَانَ مِن قَوۡمِۭ بَيۡنَكُمۡ وَبَيۡنَهُم مِّيثَٰقٞ فَدِيَةٞ مُّسَلَّمَةٌ إِلَىٰٓ أَهۡلِهِۦ وَتَحۡرِيرُ رَقَبَةٖ مُّؤۡمِنَةٖۖ فَمَن لَّمۡ يَجِدۡ فَصِيَامُ شَهۡرَيۡنِ مُتَتَابِعَيۡنِ تَوۡبَةٗ مِّنَ ٱللَّهِۗ وَكَانَ ٱللَّهُ عَلِيمًا حَكِيمٗا

ಒಬ್ಬ ಸತ್ಯವಿಶ್ವಾಸಿ ಇನ್ನೊಬ್ಬ ಸತ್ಯವಿಶ್ವಾಸಿಯನ್ನು ಕೊಲ್ಲಬಾರದು. ಪ್ರಮಾದವಶಾತ್ ಸಂಭವಿಸುವುದರ ಹೊರತು. ಒಬ್ಬ ಸತ್ಯವಿಶ್ವಾಸಿಯನ್ನು ಯಾರಾದರೂ ಪ್ರಮಾದವಶಾತ್ ಕೊಂದುಬಿಟ್ಟರೆ, ಅದಕ್ಕೆ ಪರಿಹಾರವಾಗಿ ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಸ್ವತಂತ್ರಗೊಳಿಸಬೇಕು ಮತ್ತು ಕೊಲೆಯಾದವನ ಕುಟುಂಬಕ್ಕೆ ರಕ್ತ ಪರಿಹಾರ ಕೊಡಬೇಕು. ಅವರು (ಕೊಲೆಯಾದವನ ಕುಟುಂಬದವರು) ಅದನ್ನು ಉದಾರವಾಗಿ ಬಿಟ್ಟುಬಿಡುವ ಹೊರತು. ಕೊಲೆಯಾದವನು ಶತ್ರು ಪಕ್ಷಕ್ಕೆ ಸೇರಿದ ಸತ್ಯವಿಶ್ವಾಸಿಯಾಗಿದ್ದರೆ, ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಸ್ವತಂತ್ರಗೊಳಿಸಿದರೆ ಸಾಕು. ಅವನು ನಿಮ್ಮೊಂದಿಗೆ ಒಪ್ಪಂದದಲ್ಲಿರುವ ಪಕ್ಷಕ್ಕೆ ಸೇರಿದವನಾಗಿದ್ದರೆ ಅವನ ಕುಟುಂಬದವರಿಗೆ ರಕ್ತ ಪರಿಹಾರ ಕೊಡಬೇಕು ಮತ್ತು ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಸ್ವತಂತ್ರಗೊಳಿಸಬೇಕು. ಯಾರಿಗೆ ಇದು ಸಾಧ್ಯವಿಲ್ಲವೋ ಅವನು ಸತತ ಎರಡು ತಿಂಗಳು ಉಪವಾಸ ಆಚರಿಸಬೇಕು. ಇದು ಅಲ್ಲಾಹು ನಿಶ್ಚಯಿಸಿದ ಪಶ್ಚಾತ್ತಾಪವಾಗಿದೆ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.