40 : 21
۞ أَوَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ كَانُواْ مِن قَبۡلِهِمۡۚ كَانُواْ هُمۡ أَشَدَّ مِنۡهُمۡ قُوَّةٗ وَءَاثَارٗا فِي ٱلۡأَرۡضِ فَأَخَذَهُمُ ٱللَّهُ بِذُنُوبِهِمۡ وَمَا كَانَ لَهُم مِّنَ ٱللَّهِ مِن وَاقٖ
ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಶಕ್ತಿ-ಸಾಮರ್ಥ್ಯದಲ್ಲಿ ಮತ್ತು ಭೂಮಿಯಲ್ಲಿ ಸ್ಮಾರಕಗಳನ್ನು ಬಿಟ್ಟುಹೋಗುವುದರಲ್ಲಿ ಇವರಿಗಿಂತ ಹೆಚ್ಚು ಶ್ರೇಷ್ಠರಾಗಿದ್ದರು. ಆದರೆ ಅವರು ಮಾಡಿದ ಪಾಪಗಳ ಕಾರಣದಿಂದ ಅಲ್ಲಾಹು ಅವರನ್ನು ಹಿಡಿದು ಶಿಕ್ಷಿಸಿದನು. ಅವರನ್ನು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸುವವರು ಯಾರೂ ಇರಲಿಲ್ಲ.