41 : 39
وَمِنۡ ءَايَٰتِهِۦٓ أَنَّكَ تَرَى ٱلۡأَرۡضَ خَٰشِعَةٗ فَإِذَآ أَنزَلۡنَا عَلَيۡهَا ٱلۡمَآءَ ٱهۡتَزَّتۡ وَرَبَتۡۚ إِنَّ ٱلَّذِيٓ أَحۡيَاهَا لَمُحۡيِ ٱلۡمَوۡتَىٰٓۚ إِنَّهُۥ عَلَىٰ كُلِّ شَيۡءٖ قَدِيرٌ
ನೀವು ಭೂಮಿಯನ್ನು ಒಣಗಿ ಬರಡಾಗಿ ಕಾಣುವುದು ಅವರ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ನಾವು ಅದರ ಮೇಲೆ ನೀರನ್ನು ಸುರಿಸಿದರೆ ಅದಕ್ಕೆ ಕಂಪನವುಂಟಾಗಿ ಬೆಳೆಯತೊಡಗುತ್ತದೆ. ಅದಕ್ಕೆ ಜೀವ ನೀಡಿದವನು ಖಂಡಿತವಾಗಿಯೂ ಮರಣಹೊಂದಿದವರಿಗೆ ಜೀವ ನೀಡುತ್ತಾನೆ. ನಿಶ್ಚಯವಾಗಿಯೂ ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.