وَلَئِنۡ أَذَقۡنَٰهُ رَحۡمَةٗ مِّنَّا مِنۢ بَعۡدِ ضَرَّآءَ مَسَّتۡهُ لَيَقُولَنَّ هَٰذَا لِي وَمَآ أَظُنُّ ٱلسَّاعَةَ قَآئِمَةٗ وَلَئِن رُّجِعۡتُ إِلَىٰ رَبِّيٓ إِنَّ لِي عِندَهُۥ لَلۡحُسۡنَىٰۚ فَلَنُنَبِّئَنَّ ٱلَّذِينَ كَفَرُواْ بِمَا عَمِلُواْ وَلَنُذِيقَنَّهُم مِّنۡ عَذَابٍ غَلِيظٖ
ಮನುಷ್ಯನಿಗೆ ವಿಪತ್ತು ಬಾಧಿಸಿದ ಬಳಿಕ ನಾವು ಅವನಿಗೆ ನಮ್ಮ ಕಡೆಯ ದಯೆಯ ರುಚಿಯನ್ನು ತೋರಿಸಿದರೆ, ನಿಶ್ಚಯವಾಗಿಯೂ ಅವನು ಹೇಳುವನು: “ಇದಕ್ಕೆ ನಾನು ಹಕ್ಕುಳ್ಳವನಾಗಿದ್ದೇನೆ. ಅಂತ್ಯಸಮಯವು ಸಂಭವಿಸುವುದೆಂದು ನಾನು ಭಾವಿಸುವುದಿಲ್ಲ. ಇನ್ನು ನನ್ನನ್ನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮರಳಿಸಲಾದರೂ ಸಹ ಅವನ ಬಳಿ ನನಗೆ ಒಳಿತು ಮಾತ್ರವೇ ಇರುತ್ತದೆ.” ಆ ಸತ್ಯನಿಷೇಧಿಗಳಿಗೆ ಅವರು ಮಾಡಿದ ಕರ್ಮಗಳ ಬಗ್ಗೆ ನಾವು ಖಂಡಿತ ತಿಳಿಸಿಕೊಡುವೆವು ಮತ್ತು ಅವರಿಗೆ ಕಠೋರ ಶಿಕ್ಷೆಯ ರುಚಿಯನ್ನು ಖಂಡಿತ ತೋರಿಸುವೆವು.