42 : 48
فَإِنۡ أَعۡرَضُواْ فَمَآ أَرۡسَلۡنَٰكَ عَلَيۡهِمۡ حَفِيظًاۖ إِنۡ عَلَيۡكَ إِلَّا ٱلۡبَلَٰغُۗ وَإِنَّآ إِذَآ أَذَقۡنَا ٱلۡإِنسَٰنَ مِنَّا رَحۡمَةٗ فَرِحَ بِهَاۖ وَإِن تُصِبۡهُمۡ سَيِّئَةُۢ بِمَا قَدَّمَتۡ أَيۡدِيهِمۡ فَإِنَّ ٱلۡإِنسَٰنَ كَفُورٞ
ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲೆ ಕಾವಲುಗಾರರಾಗಿ ಕಳುಹಿಸಿಲ್ಲ. ನಿಮ್ಮ ಕರ್ತವ್ಯವು ಸಂದೇಶವನ್ನು ತಲುಪಿಸುವುದು ಮಾತ್ರವಾಗಿದೆ. ನಿಶ್ಚಯವಾಗಿಯೂ ನಾವು ಮನುಷ್ಯನಿಗೆ ನಮ್ಮ ಕಡೆಯ ದಯೆಯ ರುಚಿಯನ್ನು ತೋರಿಸಿದರೆ ಅವನು ಸಂತೋಷಪಡುತ್ತಾನೆ. ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ಕರ್ಮಗಳ ಪ್ರತಿಫಲವಾಗಿ ಅವರಿಗೆ ಏನಾದರೂ ವಿಪತ್ತು ಸಂಭವಿಸಿದರೆ ನಿಶ್ಚಯವಾಗಿಯೂ ಮನುಷ್ಯನು ಕೃತಘ್ನನಾಗಿ ಬಿಡುತ್ತಾನೆ.