46 : 20
وَيَوۡمَ يُعۡرَضُ ٱلَّذِينَ كَفَرُواْ عَلَى ٱلنَّارِ أَذۡهَبۡتُمۡ طَيِّبَٰتِكُمۡ فِي حَيَاتِكُمُ ٱلدُّنۡيَا وَٱسۡتَمۡتَعۡتُم بِهَا فَٱلۡيَوۡمَ تُجۡزَوۡنَ عَذَابَ ٱلۡهُونِ بِمَا كُنتُمۡ تَسۡتَكۡبِرُونَ فِي ٱلۡأَرۡضِ بِغَيۡرِ ٱلۡحَقِّ وَبِمَا كُنتُمۡ تَفۡسُقُونَ
ಸತ್ಯನಿಷೇಧಿಗಳನ್ನು ನರಕದ ಮುಂದೆ ಹಾಜರುಪಡಿಸಲಾಗುವ ದಿನ! (ಅವರೊಡನೆ ಹೇಳಲಾಗುವುದು): “ನೀವು ಇಹಲೋಕ ಜೀವನದಲ್ಲೇ ನಿಮ್ಮ ಸತ್ಕರ್ಮಗಳನ್ನು ಹಾಳು ಮಾಡಿದ್ದೀರಿ ಮತ್ತು ಅದರ ಲಾಭವನ್ನು ಪಡೆದಿದ್ದೀರಿ. ನೀವು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರುತ್ತಿದ್ದ ಮತ್ತು ದುಷ್ಕರ್ಮವೆಸಗುತ್ತಿದ್ದ ಕಾರಣ ಇಂದು ನಿಮಗೆ ಅವಮಾನಕರ ಶಿಕ್ಷೆಯನ್ನು ಪ್ರತಿಫಲವಾಗಿ ನೀಡಲಾಗುವುದು.”