سَيَقُولُ لَكَ ٱلۡمُخَلَّفُونَ مِنَ ٱلۡأَعۡرَابِ شَغَلَتۡنَآ أَمۡوَٰلُنَا وَأَهۡلُونَا فَٱسۡتَغۡفِرۡ لَنَاۚ يَقُولُونَ بِأَلۡسِنَتِهِم مَّا لَيۡسَ فِي قُلُوبِهِمۡۚ قُلۡ فَمَن يَمۡلِكُ لَكُم مِّنَ ٱللَّهِ شَيۡـًٔا إِنۡ أَرَادَ بِكُمۡ ضَرًّا أَوۡ أَرَادَ بِكُمۡ نَفۡعَۢاۚ بَلۡ كَانَ ٱللَّهُ بِمَا تَعۡمَلُونَ خَبِيرَۢا
ಮರುಭೂಮಿ ನಿವಾಸಿಗಳಲ್ಲಿ ಹಿಂದೆ ಉಳಿದವರು ನಿಮ್ಮೊಡನೆ ಹೇಳುತ್ತಾರೆ: “ನಮ್ಮ ಆಸ್ತಿ ಮತ್ತು ಕುಟುಂಬಗಳು ನಮ್ಮನ್ನು ಕಾರ್ಯಮಗ್ನಗೊಳಿಸಿವೆ. ಆದ್ದರಿಂದ ನೀವು ನಮಗೋಸ್ಕರ ಕ್ಷಮೆಯಾಚಿಸಿರಿ.” ಅವರು ತಮ್ಮ ಹೃದಯಗಳಲ್ಲಿ ಇಲ್ಲದಿರುವುದನ್ನು ತಮ್ಮ ನಾಲಗೆಗಳ ಮೂಲಕ ಹೇಳುತ್ತಾರೆ. ಹೇಳಿರಿ: “ಅಲ್ಲಾಹು ನಿಮಗೆ ಏನಾದರೂ ತೊಂದರೆ ಮಾಡಲು ಬಯಸಿದರೆ ಅಥವಾ ನಿಮಗೆ ಏನಾದರೂ ಪ್ರಯೋಜನ ನೀಡಲು ಬಯಸಿದರೆ ನಿಮಗೋಸ್ಕರ ಅಲ್ಲಾಹನ ಕಡೆಯಿಂದ ಬರುವ ಯಾವುದೇ ವಸ್ತುವಿನ ಮೇಲೆ ಅಧಿಕಾರ ಹೊಂದಿರುವವರು ಯಾರು?” ಅಲ್ಲ, ವಾಸ್ತವವಾಗಿ, ನೀವು ಮಾಡುತ್ತಿರುವ ಕರ್ಮಗಳನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ.