48 : 26
إِذۡ جَعَلَ ٱلَّذِينَ كَفَرُواْ فِي قُلُوبِهِمُ ٱلۡحَمِيَّةَ حَمِيَّةَ ٱلۡجَٰهِلِيَّةِ فَأَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلۡمُؤۡمِنِينَ وَأَلۡزَمَهُمۡ كَلِمَةَ ٱلتَّقۡوَىٰ وَكَانُوٓاْ أَحَقَّ بِهَا وَأَهۡلَهَاۚ وَكَانَ ٱللَّهُ بِكُلِّ شَيۡءٍ عَلِيمٗا
ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ದುರಭಿಮಾನವನ್ನು—ಅಜ್ಞಾನಕಾಲದ ದುರಭಿಮಾನವನ್ನು—ಇಟ್ಟುಕೊಂಡಿದ್ದ ಸಂದರ್ಭ! ಅಲ್ಲಾಹು ಅವನ ಸಂದೇಶವಾಹಕರ ಮೇಲೆ ಮತ್ತು ಸತ್ಯವಿಶ್ವಾಸಿಗಳ ಮೇಲೆ ಅವನ ಕಡೆಯ ಮನಃಶಾಂತಿಯನ್ನು ಇಳಿಸಿಕೊಟ್ಟನು. ಅಲ್ಲಾಹು ಅವರನ್ನು ದೇವಭಯದಲ್ಲಿ ದೃಢವಾಗಿ ನಿಲ್ಲಿಸಿದನು. ಅವರು ಅದಕ್ಕೆ ಅರ್ಹರು ಮತ್ತು ಅದರ ಹಕ್ಕುಳ್ಳವರಾಗಿದ್ದರು. ಅಲ್ಲಾಹು ಎಲ್ಲ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.