إِذۡ قَالَ ٱللَّهُ يَٰعِيسَى ٱبۡنَ مَرۡيَمَ ٱذۡكُرۡ نِعۡمَتِي عَلَيۡكَ وَعَلَىٰ وَٰلِدَتِكَ إِذۡ أَيَّدتُّكَ بِرُوحِ ٱلۡقُدُسِ تُكَلِّمُ ٱلنَّاسَ فِي ٱلۡمَهۡدِ وَكَهۡلٗاۖ وَإِذۡ عَلَّمۡتُكَ ٱلۡكِتَٰبَ وَٱلۡحِكۡمَةَ وَٱلتَّوۡرَىٰةَ وَٱلۡإِنجِيلَۖ وَإِذۡ تَخۡلُقُ مِنَ ٱلطِّينِ كَهَيۡـَٔةِ ٱلطَّيۡرِ بِإِذۡنِي فَتَنفُخُ فِيهَا فَتَكُونُ طَيۡرَۢا بِإِذۡنِيۖ وَتُبۡرِئُ ٱلۡأَكۡمَهَ وَٱلۡأَبۡرَصَ بِإِذۡنِيۖ وَإِذۡ تُخۡرِجُ ٱلۡمَوۡتَىٰ بِإِذۡنِيۖ وَإِذۡ كَفَفۡتُ بَنِيٓ إِسۡرَٰٓءِيلَ عَنكَ إِذۡ جِئۡتَهُم بِٱلۡبَيِّنَٰتِ فَقَالَ ٱلَّذِينَ كَفَرُواْ مِنۡهُمۡ إِنۡ هَٰذَآ إِلَّا سِحۡرٞ مُّبِينٞ
ಅಲ್ಲಾಹು (ಈಸಾರೊಂದಿಗೆ) ಹೇಳುವ ಸಂದರ್ಭ: “ಓ ಮರ್ಯಮರ ಮಗ ಈಸಾ! ನಾನು ಪವಿತ್ರಾತ್ಮನ ಮೂಲಕ ನಿಮಗೆ ಬೆಂಬಲ ನೀಡಿ ನೀವು ತೊಟ್ಟಿಲಲ್ಲಿಯೂ ಮಧ್ಯವಯಸ್ಸಿನಲ್ಲಿಯೂ ಜನರೊಂದಿಗೆ ಮಾತನಾಡುತ್ತಿದ್ದ ಸಂದರ್ಭ; ನಾನು ನಿಮಗೆ ಗ್ರಂಥವನ್ನು, ವಿವೇಕವನ್ನು, ತೌರಾತ್ ಮತ್ತು ಇಂಜೀಲನ್ನು ಕಲಿಸಿಕೊಟ್ಟ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಜೇಡಿಮಣ್ಣಿನಿಂದ ಹಕ್ಕಿಯ ರೂಪವನ್ನು ತಯಾರಿಸಿ ಅದರಲ್ಲಿ ಊದಿದಾಗ ನನ್ನ ಅಪ್ಪಣೆಯಿಂದ ಅದು ಹಕ್ಕಿಯಾಗಿ ಮಾರ್ಪಡುತ್ತಿದ್ದ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಹುಟ್ಟು ಕುರುಡನನ್ನು ಮತ್ತು ಕುಷ್ಠರೋಗಿಯನ್ನು ಗುಣಪಡಿಸುತ್ತಿದ್ದ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಸತ್ತವರನ್ನು (ಸಮಾಧಿಯಿಂದ) ಹೊರತರುತ್ತಿದ್ದ ಸಂದರ್ಭ ಮತ್ತು ನೀವು ಇಸ್ರಾಯೇಲ್ ಮಕ್ಕಳ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಹೋದಾಗ ಅವರಲ್ಲಿರುವ ಸತ್ಯನಿಷೇಧಿಗಳು, ಇದು ಸ್ಪಷ್ಟ ವಾಮಾಚಾರವಾಗಿದೆಯೆಂದು ಹೇಳಿದಾಗ ನಿಮ್ಮನ್ನು ಅವರಿಂದ ಪಾರು ಮಾಡಿದ ಸಂದರ್ಭ ನಾನು ನಿಮಗೆ ಮತ್ತು ನಿಮ್ಮ ತಾಯಿಗೆ ಅನುಗ್ರಹಿಸಿದ ಅನುಗ್ರಹಗಳನ್ನು ಸ್ಮರಿಸಿರಿ.”