۞ وَلَقَدۡ أَخَذَ ٱللَّهُ مِيثَٰقَ بَنِيٓ إِسۡرَٰٓءِيلَ وَبَعَثۡنَا مِنۡهُمُ ٱثۡنَيۡ عَشَرَ نَقِيبٗاۖ وَقَالَ ٱللَّهُ إِنِّي مَعَكُمۡۖ لَئِنۡ أَقَمۡتُمُ ٱلصَّلَوٰةَ وَءَاتَيۡتُمُ ٱلزَّكَوٰةَ وَءَامَنتُم بِرُسُلِي وَعَزَّرۡتُمُوهُمۡ وَأَقۡرَضۡتُمُ ٱللَّهَ قَرۡضًا حَسَنٗا لَّأُكَفِّرَنَّ عَنكُمۡ سَيِّـَٔاتِكُمۡ وَلَأُدۡخِلَنَّكُمۡ جَنَّٰتٖ تَجۡرِي مِن تَحۡتِهَا ٱلۡأَنۡهَٰرُۚ فَمَن كَفَرَ بَعۡدَ ذَٰلِكَ مِنكُمۡ فَقَدۡ ضَلَّ سَوَآءَ ٱلسَّبِيلِ
ಅಲ್ಲಾಹು ಇಸ್ರಾಯೇಲ್ ಮಕ್ಕಳಿಂದ ಈಗಾಗಲೇ ಕರಾರನ್ನು ಪಡೆದಿದ್ದಾನೆ. ನಾವು ಅವರಲ್ಲಿ ಹನ್ನೆರಡು ಜನರನ್ನು ಮುಖಂಡರನ್ನಾಗಿ ಮಾಡಿ ಕಳುಹಿಸಿದೆವು. ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಾನು ನಿಮ್ಮ ಜೊತೆಯಲ್ಲಿದ್ದೇನೆ. ನೀವು ನಮಾಝ್ ಸಂಸ್ಥಾಪಿಸಿದರೆ, ಝಕಾತ್ ನೀಡಿದರೆ, ನನ್ನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಟ್ಟರೆ, ಅವರಿಗೆ ಬೆಂಬಲ ನೀಡಿದರೆ ಮತ್ತು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡಿದರೆ, ನಿಶ್ಚಯವಾಗಿಯೂ ನಾನು ನಿಮ್ಮ ಪಾಪಗಳನ್ನು ಅಳಿಸುವೆನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸುವೆನು. ಆದರೆ ಅದರ ಬಳಿಕವೂ ನಿಮ್ಮಲ್ಲಿ ಸತ್ಯವನ್ನು ನಿಷೇಧಿಸುವವನು ನೇರ ಮಾರ್ಗದಿಂದ ತಪ್ಪಿ ಹೋಗಿದ್ದಾನೆ.”