إِنَّآ أَنزَلۡنَا ٱلتَّوۡرَىٰةَ فِيهَا هُدٗى وَنُورٞۚ يَحۡكُمُ بِهَا ٱلنَّبِيُّونَ ٱلَّذِينَ أَسۡلَمُواْ لِلَّذِينَ هَادُواْ وَٱلرَّبَّٰنِيُّونَ وَٱلۡأَحۡبَارُ بِمَا ٱسۡتُحۡفِظُواْ مِن كِتَٰبِ ٱللَّهِ وَكَانُواْ عَلَيۡهِ شُهَدَآءَۚ فَلَا تَخۡشَوُاْ ٱلنَّاسَ وَٱخۡشَوۡنِ وَلَا تَشۡتَرُواْ بِـَٔايَٰتِي ثَمَنٗا قَلِيلٗاۚ وَمَن لَّمۡ يَحۡكُم بِمَآ أَنزَلَ ٱللَّهُ فَأُوْلَٰٓئِكَ هُمُ ٱلۡكَٰفِرُونَ
ನಿಶ್ಚಯವಾಗಿಯೂ ನಾವು ತೌರಾತನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ಸನ್ಮಾರ್ಗ ಮತ್ತು ಬೆಳಕಿದೆ. (ಅಲ್ಲಾಹನಿಗೆ) ಶರಣಾದ ಪ್ರವಾದಿಗಳು, ದೇವನಿಷ್ಠರು ಮತ್ತು ವಿದ್ವಾಂಸರು ಅದರಲ್ಲಿರುವಂತೆ ಯಹೂದಿಗಳ ನಡುವೆ ತೀರ್ಪು ನೀಡುತ್ತಿದ್ದರು. ಏಕೆಂದರೆ ಅಲ್ಲಾಹನ ಗ್ರಂಥದ ಸಂರಕ್ಷಣೆಯನ್ನು ಅವರಿಗೆ ವಹಿಸಿಕೊಡಲಾಗಿತ್ತು. ಅವರು ಅದಕ್ಕೆ ಸಾಕ್ಷಿಗಳಾಗಿದ್ದರು. ಆದ್ದರಿಂದ ನೀವು ಜನರನ್ನು ಭಯಪಡಬೇಡಿ. ನನ್ನನ್ನು ಭಯಪಡಿರಿ. ನನ್ನ ವಚನಗಳನ್ನು ಕೀಳು ದರಕ್ಕೆ ಮಾರಾಟ ಮಾಡಬೇಡಿ. ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ಯಾರು ತೀರ್ಪು ನೀಡುವುದಿಲ್ಲವೋ ಅವರೇ ಸತ್ಯನಿಷೇಧಿಗಳು.