يَٰٓأَيُّهَا ٱلَّذِينَ ءَامَنُواْ لَا تَقۡتُلُواْ ٱلصَّيۡدَ وَأَنتُمۡ حُرُمٞۚ وَمَن قَتَلَهُۥ مِنكُم مُّتَعَمِّدٗا فَجَزَآءٞ مِّثۡلُ مَا قَتَلَ مِنَ ٱلنَّعَمِ يَحۡكُمُ بِهِۦ ذَوَا عَدۡلٖ مِّنكُمۡ هَدۡيَۢا بَٰلِغَ ٱلۡكَعۡبَةِ أَوۡ كَفَّٰرَةٞ طَعَامُ مَسَٰكِينَ أَوۡ عَدۡلُ ذَٰلِكَ صِيَامٗا لِّيَذُوقَ وَبَالَ أَمۡرِهِۦۗ عَفَا ٱللَّهُ عَمَّا سَلَفَۚ وَمَنۡ عَادَ فَيَنتَقِمُ ٱللَّهُ مِنۡهُۚ وَٱللَّهُ عَزِيزٞ ذُو ٱنتِقَامٍ
ಓ ಸತ್ಯವಿಶ್ವಾಸಿಗಳೇ! ನೀವು ಇಹ್ರಾಮ್ನಲ್ಲಿರುವಾಗ ಬೇಟೆಯಾಡಿ ಪ್ರಾಣಿಯನ್ನು ಕೊಲ್ಲಬೇಡಿ. ನಿಮ್ಮಲ್ಲಿ ಯಾರಾದರೂ ಉದ್ದೇಶಪೂರ್ವಕ ಬೇಟೆಯಾಡಿ ಪ್ರಾಣಿಯನ್ನು ಕೊಂದರೆ, ಅದಕ್ಕಿರುವ ಪರಿಹಾರವು ಅವನು ಕೊಂದ ಮೃಗವನ್ನು ಹೋಲುತ್ತದೆಯೆಂದು ಇಬ್ಬರು ನ್ಯಾಯಸಮ್ಮತ ಜನರು ತೀರ್ಪು ನೀಡುವ ಪ್ರಾಣಿಯನ್ನು ಕಅಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪುವ ಬಲಿಮೃಗವಾಗಿ ನೀಡುವುದು; ಅಥವಾ ಅದಕ್ಕೆ ಪರಿಹಾರವಾಗಿ ಬಡವರಿಗೆ ಅನ್ನದಾನ ಮಾಡುವುದು; ಅಥವಾ ಅದಕ್ಕೆ ಸಮಾನವಾಗುವಷ್ಟು ಸಂಖ್ಯೆಯ ಉಪವಾಸ ಆಚರಿಸುವುದು. ಅದು ಅವನು ಮಾಡಿದ ಕರ್ಮದ ಫಲವನ್ನು ಅವನು ಅನುಭವಿಸಲಿಕ್ಕಾಗಿ. ಈ ಹಿಂದೆ ಸಂಭವಿಸಿದ ತಪ್ಪುಗಳನ್ನು ಅಲ್ಲಾಹು ಕ್ಷಮಿಸಿದ್ದಾನೆ. ಆದರೆ ಯಾರಾದರೂ ಅದನ್ನು ಪುನರಾವರ್ತಿಸಿದರೆ, ಅಲ್ಲಾಹು ಅವನಿಂದ ಪ್ರತೀಕಾರವನ್ನು ಪಡೆಯುವನು. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ.
- ಇಹ್ರಾಮ್ನಲ್ಲಿರುವಾಗ ಉದ್ದೇಶಪೂರ್ವಕ ಬೇಟೆಯಾಡಿದರೆ, ಅದಕ್ಕೆ ನೀಡಬೇಕಾದ ಪರಿಹಾರವೇನೆಂದರೆ, ಕೊಂದ ಪ್ರಾಣಿಗೆ ಸಮಾನವೆಂದು ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ತೀರ್ಪು ನೀಡುವ ಜಾನುವಾರನ್ನು (ಕುರಿ, ಹಸು, ಒಂಟೆ) ಬಲಿ ನೀಡಿ ಹರಮ್ನಲ್ಲಿರುವ ಬಡವರಿಗೆ ಹಂಚುವುದು. ಸಮಾನವಾದ ಜಾನುವಾರು ಸಿಗದಿದ್ದರೆ, ಆ ಜಾನುವಾರಿನ ಮೌಲ್ಯದ ಆಹಾರವನ್ನು ಒಬ್ಬ ಬಡವನಿಗೆ ಅರ್ಧ ಸಾಅ್ ಎಂಬಂತೆ ದಾನ ಮಾಡುವುದು. ಅಥವಾ ಪ್ರತಿ ಅರ್ಧ ಸಾಅ್ಗೆ ಒಂದು ಉಪವಾಸ ಎಂಬಂತೆ ಉಪವಾಸ ಆಚರಿಸುವುದು.