يَٰٓأَيُّهَا ٱلَّذِينَ ءَامَنُواْ كُونُوٓاْ أَنصَارَ ٱللَّهِ كَمَا قَالَ عِيسَى ٱبۡنُ مَرۡيَمَ لِلۡحَوَارِيِّـۧنَ مَنۡ أَنصَارِيٓ إِلَى ٱللَّهِۖ قَالَ ٱلۡحَوَارِيُّونَ نَحۡنُ أَنصَارُ ٱللَّهِۖ فَـَٔامَنَت طَّآئِفَةٞ مِّنۢ بَنِيٓ إِسۡرَٰٓءِيلَ وَكَفَرَت طَّآئِفَةٞۖ فَأَيَّدۡنَا ٱلَّذِينَ ءَامَنُواْ عَلَىٰ عَدُوِّهِمۡ فَأَصۡبَحُواْ ظَٰهِرِينَ
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನ ಸಹಾಯಕರಾಗಿರಿ. ಮರ್ಯಮರ ಮಗ ಈಸಾ ಹವಾರಿಗಳೊಡನೆ ಕೇಳಿದಂತೆ: “ಅಲ್ಲಾಹನ ಮಾರ್ಗದಲ್ಲಿ ನನಗೆ ಸಹಾಯಕರಾಗಿ ಯಾರಿದ್ದೀರಿ?” ಹವಾರಿಗಳು ಉತ್ತರಿಸಿದರು: “ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯ ಮಾಡುತ್ತೇವೆ.” ನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಒಂದು ಗುಂಪು ವಿಶ್ವಾಸವಿಟ್ಟರೆ ಇನ್ನೊಂದು ಗುಂಪು ನಿಷೇಧಿಸಿತು. ಆಗ ನಾವು ಸತ್ಯವಿಶ್ವಾಸಿಗಳಿಗೆ ಅವರ ವೈರಿಗಳ ವಿರುದ್ಧ ಬೆಂಬಲವನ್ನು ನೀಡಿದೆವು. ತನ್ನಿಮಿತ್ತ ಅವರು ವಿಜಯಿಗಳಾದರು.