سَأَصۡرِفُ عَنۡ ءَايَٰتِيَ ٱلَّذِينَ يَتَكَبَّرُونَ فِي ٱلۡأَرۡضِ بِغَيۡرِ ٱلۡحَقِّ وَإِن يَرَوۡاْ كُلَّ ءَايَةٖ لَّا يُؤۡمِنُواْ بِهَا وَإِن يَرَوۡاْ سَبِيلَ ٱلرُّشۡدِ لَا يَتَّخِذُوهُ سَبِيلٗا وَإِن يَرَوۡاْ سَبِيلَ ٱلۡغَيِّ يَتَّخِذُوهُ سَبِيلٗاۚ ذَٰلِكَ بِأَنَّهُمۡ كَذَّبُواْ بِـَٔايَٰتِنَا وَكَانُواْ عَنۡهَا غَٰفِلِينَ
ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರಪಡುವವರನ್ನು ನಾನು ನನ್ನ ವಚನಗಳಿಂದ ತಿರುಗಿಸಿಬಿಡುವೆನು. ಅವರು ದೃಷ್ಟಾಂತಗಳೆಲ್ಲವನ್ನು ನೋಡಿದರೂ ಸಹ ಅದರಲ್ಲಿ ವಿಶ್ವಾಸವಿಡುವುದಿಲ್ಲ. ಅವರು ಒಳಿತಿನ ಮಾರ್ಗವನ್ನು ಕಂಡರೆ ಅದನ್ನು ತಮ್ಮ ಮಾರ್ಗವಾಗಿ ಸ್ವೀಕರಿಸುವುದಿಲ್ಲ. ಅವರು ಕೆಟ್ಟ ಮಾರ್ಗವನ್ನು ಕಂಡರೆ ಅದನ್ನು ತಮ್ಮ ಮಾರ್ಗವಾಗಿ ಸ್ವೀಕರಿಸುತ್ತಾರೆ. ಅದೇಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು.