وَإِلَىٰ ثَمُودَ أَخَاهُمۡ صَٰلِحٗاۚ قَالَ يَٰقَوۡمِ ٱعۡبُدُواْ ٱللَّهَ مَا لَكُم مِّنۡ إِلَٰهٍ غَيۡرُهُۥۖ قَدۡ جَآءَتۡكُم بَيِّنَةٞ مِّن رَّبِّكُمۡۖ هَٰذِهِۦ نَاقَةُ ٱللَّهِ لَكُمۡ ءَايَةٗۖ فَذَرُوهَا تَأۡكُلۡ فِيٓ أَرۡضِ ٱللَّهِۖ وَلَا تَمَسُّوهَا بِسُوٓءٖ فَيَأۡخُذَكُمۡ عَذَابٌ أَلِيمٞ
ಸಮೂದ್ ಗೋತ್ರದವರ ಬಳಿಗೆ ನಾವು ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟ ಸಾಕ್ಷ್ಯಾಧಾರಗಳು ಬಂದಿವೆ. ಇದು ಅಲ್ಲಾಹನ ಒಂಟೆ. ಇದು ನಿಮಗೆ ದೃಷ್ಟಾಂತವಾಗಿದೆ. ಅದನ್ನು ಅದರ ಪಾಡಿಗೆ ಬಿಟ್ಟುಬಿಡಿ. ಅದು ಅಲ್ಲಾಹನ ಭೂಮಿಯಲ್ಲಿ ಮೇಯುತ್ತಿರಲಿ. ಅದಕ್ಕೆ ಯಾವುದೇ ತೊಂದರೆ ಕೊಡಬೇಡಿ. ಹಾಗೇನಾದರೂ ಆದರೆ ಯಾತನಾಮಯ ಶಿಕ್ಷೆಯು ನಿಮ್ಮನ್ನು ಹಿಡಿಯುವುದು.