قَدِ ٱفۡتَرَيۡنَا عَلَى ٱللَّهِ كَذِبًا إِنۡ عُدۡنَا فِي مِلَّتِكُم بَعۡدَ إِذۡ نَجَّىٰنَا ٱللَّهُ مِنۡهَاۚ وَمَا يَكُونُ لَنَآ أَن نَّعُودَ فِيهَآ إِلَّآ أَن يَشَآءَ ٱللَّهُ رَبُّنَاۚ وَسِعَ رَبُّنَا كُلَّ شَيۡءٍ عِلۡمًاۚ عَلَى ٱللَّهِ تَوَكَّلۡنَاۚ رَبَّنَا ٱفۡتَحۡ بَيۡنَنَا وَبَيۡنَ قَوۡمِنَا بِٱلۡحَقِّ وَأَنتَ خَيۡرُ ٱلۡفَٰتِحِينَ
ಅಲ್ಲಾಹು ನಮ್ಮನ್ನು ನಿಮ್ಮ ಧರ್ಮದಿಂದ ರಕ್ಷಿಸಿದ ಬಳಿಕ ನಾವು ಪುನಃ ಅದಕ್ಕೆ ಮರಳಿದರೆ, ನಾವು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸಿದವರಾಗುವೆವು. ನಿಮ್ಮ ಧರ್ಮಕ್ಕೆ ಮರಳಲು ನಮ್ಮಿಂದ ಸುತರಾಂ ಸಾಧ್ಯವಿಲ್ಲ. ನಮ್ಮ ಪರಿಪಾಲಕನಾದ ಅಲ್ಲಾಹು ಇಚ್ಛಿಸಿದರೆ ಹೊರತು. ನಮ್ಮ ಪರಿಪಾಲಕನ (ಅಲ್ಲಾಹನ) ಜ್ಞಾನವು ಎಲ್ಲಾ ವಿಷಯಗಳನ್ನು ಒಳಗೊಳ್ಳುವಷ್ಟು ವಿಶಾಲವಾಗಿದೆ. ನಾವು ಅಲ್ಲಾಹನಲ್ಲಿ ಭರವಸೆಯಿಟ್ಟಿದ್ದೇವೆ. ಓ ನಮ್ಮ ಪರಿಪಾಲಕನೇ! ನಮ್ಮ ಮತ್ತು ನಮ್ಮ ಜನರ ನಡುವೆ ಸತ್ಯವಾದ ತೀರ್ಪನ್ನು ನೀಡು. ತೀರ್ಪು ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.”