9 : 34
۞ يَٰٓأَيُّهَا ٱلَّذِينَ ءَامَنُوٓاْ إِنَّ كَثِيرٗا مِّنَ ٱلۡأَحۡبَارِ وَٱلرُّهۡبَانِ لَيَأۡكُلُونَ أَمۡوَٰلَ ٱلنَّاسِ بِٱلۡبَٰطِلِ وَيَصُدُّونَ عَن سَبِيلِ ٱللَّهِۗ وَٱلَّذِينَ يَكۡنِزُونَ ٱلذَّهَبَ وَٱلۡفِضَّةَ وَلَا يُنفِقُونَهَا فِي سَبِيلِ ٱللَّهِ فَبَشِّرۡهُم بِعَذَابٍ أَلِيمٖ
ಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ವಿದ್ವಾಂಸರು ಮತ್ತು ಸಂತರಲ್ಲಿ ಹೆಚ್ಚಿನವರು ಅನ್ಯಾಯವಾಗಿ ಜನರ ಧನವನ್ನು ತಿನ್ನುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ. ಯಾರು ಚಿನ್ನ ಮತ್ತು ಬೆಳ್ಳಿಯನ್ನು ದಾಸ್ತಾನು ಮಾಡುತ್ತಾರೋ ಮತ್ತು ಅದನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲವೋ ಅವರಿಗೆ ಯಾತನಾಮಯ ಶಿಕ್ಷೆಯ ಬಗ್ಗೆ ಸುವಾರ್ತೆಯನ್ನು ನೀಡಿರಿ.